ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಭಜನಾ ಮಂದಿರ 32ನೇ ವರ್ಷದ ಆರಾಧನಾ ಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ನಿತ್ಯಾನಂದ ನಗರ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ 32ನೇ ವರ್ಷದ ಆರಾಧನಾ ಮಹೋತ್ಸವ ಜ. 20 ರಂದು ಆರಂಭಗೊಂಡಿದೆ.

ಇಜ್ಜ ಶಿವಕ್ಷೇತ್ರದ ಧರ್ಮದರ್ಶಿ ಸತ್ಯನಾರಾಯಣ ಭಟ್ ವಿವಿಧ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಪ್ರತಿದಿನ ರಾತ್ರಿ ಗಂಟೆ 7ರಿಂದ ಭಜನೆ ನಡೆಯಲಿದ್ದು, ಜ.23ರಂದು ಬೆಳಿಗ್ಗೆ ಗಂಟೆ 7.30ರಿಂದ ಗುರುವರ್ಯರ ಪ್ರತಿಷ್ಠಾ ವರ್ಧಂತಿ ಉತ್ಸವ ಪ್ರಯುಕ್ತ ಪಂಚಲೋಹದ ವಿಗ್ರಹಕ್ಕೆ ಭಕ್ತರಿಂದ ಸ್ವತಃ ಸೀಯಾಳ ಅಭಿಷೇಕ ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 8.30ರಿಂದ ‘ಸಂತಾನ ಗೋಪಾಲಕೃಷ್ಣ ಜಪ ಮತ್ತು ಹವನ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಬಿ.ದಿನೇಶ ಭಂಡಾರಿ ತಿಳಿಸಿದರು.

ಸಮಿತಿ ಗೌರವಾಧ್ಯಕ್ಷ ಸುರೇಶ ಕುಲಾಲ್, ಕಾರ್ಯದರ್ಶಿ ಹರೀಶ ಎಂ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ಹರೀಶ ಶೆಟ್ಟಿ, ಗೌರವಾಧ್ಯಕ್ಷ ಉದಯ ಕುಮಾರ್ ರಾವ್, ಪ್ರಧಾನ ಕಾರ್ಯದರ್ಶಿ ಚೆನ್ನಕೇಶವ ಡಿ.ಆರ್. ಸೇರಿದಂತೆ ಅನೇಕರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *