ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ. 25 ರಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28) ಎಂದು ಗುರುತಿಸಲಾಗಿದೆ.

ಜ. 25 ರಂದು ಹೇಮಂತ್ ಶೆಣೈ ಅವರು ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.





