ವಿಟ್ಲ: ಆಕಸ್ಮಿಕವಾಗಿ ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ.

ಜ. 27ರಂದು ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ತೆರಳಿ ಮನೆಗೆ ಹಿಂತಿರುಗುವ ವೇಳೆ ರಾತ್ರಿ ಸಮಯದಲ್ಲಿ ಆಯತಪ್ಪಿ ಬಾವಿಗೆ ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





