Breaking
21 Jun 2026, Sun

“ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆ

ಬಂಟ್ವಾಳ : ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಬಂಟ್ವಾಳ ತಾಲೂಕು ವತಿಯಿಂದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದಾರೆ.

ಸಂಗೀತ ಶರ್ಮ ಪಿ ಜಿ ಅವರು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ ಸಾಧನೆಯನ್ನು ಗುರುತಿಸಿ ಈಗಾಗಲೇ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ” ಪ್ರಶಸ್ತಿ, ರಾಜ್ಯಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿ, ಹಾಗೂ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆ ಸಿ ಐ ಮುಂತಾದ ಅನೇಕ ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದ್ದು , ಅವರ ವಿಶೇಷ ಸೇವೆಯನ್ನು ಗುರುತಿಸಿ ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಈ ವರ್ಷದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ ರಾಜ್ಯ ಪ್ರಶಸ್ತಿಗೆ” ಆಯ್ಕೆಯಾಗಿರುತ್ತಾರೆ.

ಫೆಬ್ರವರಿ 3 ರಂದು ಬಿಸಿ ರೋಡ್ ಸ್ಪರ್ಶಕಲಾ ಮಂದಿರದಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಉಪಸ್ಥಿತಿಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಪ್ರಶಸ್ತಿ ಪ್ರಧಾನ ಮಾಡಲಿರುವರು ಎಂದು ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ ನ್ಯಾಯವಾದಿ ಶೈಲಜಾ ರಾಜೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *