ಫೆ.6 ಕೈತ್ರೋಡಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ 33ನೇ ವರ್ಷದ ಯಕ್ಷಗಾನ

ಬಂಟ್ವಾಳ: ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟ ಸ್ರ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಫೆ.6ರಂದು ಕಟೀಲು ಮೇಳದಿಂದ 33ನೇ ವರ್ಷದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ರಾಯಿ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6 ಗಂಟೆಗೆ ಚೌಕಿ ಪೂಜೆ ಬಳಿಕ ಯಕ್ಷಗಾನ ನಡೆಯಲಿದೆ.
ರಾತ್ರಿ 8ಗಂಟೆಗ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *