ಮಂಗಳೂರು : ಯುವಕನೊಬ್ಬನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾದ ಘಟನೆ ಪಚ್ಚನಾಡಿಯಲ್ಲಿ ನಡೆದಿದೆ.
ಮೃತರನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ.

ರೈಲ್ವೇ ಹಳಿಯಲ್ಲಿ ಮೃತನಿಗೆ ಸೇರಿದ ಬ್ಯಾಗ್ ಸೇರಿದಂತೆ ಇತರ ವಸ್ತುಗಳು ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.
ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.








