Breaking
10 Feb 2026, Tue

ಕುಕ್ಕಿಪಾಡಿ ಗ್ರಾಮ ಪಂಚಾಯತ್ ವತಿಯಿಂದ ‘ಕರ್ನಾಟಕ ಸಹಕಾರ ಶಿರೋಮಣಿ–2025’ ಪ್ರಶಸ್ತಿ ವಿಜೇತ ಪ್ರಭಾಕರ ಪ್ರಭು ಅವರಿಗೆ ಅಭಿನಂದನೆ

ಬಂಟ್ವಾಳ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಸಾಧಿಸಿದ ಸಾರ್ಥಕ ಸಾಧನೆ ಮತ್ತು ವಿವಿಧ ಕ್ಷೆತ್ರದಲ್ಲಿ ಸಲ್ಲಿಸಿದ ಜನಪರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ದಿನ ಪತ್ರಿಕೆ “ಕನ್ನಡಪ್ರಭ ಹಾಗೂ ರಾಜ್ಯದ ಪ್ರಮುಖ ಸುದ್ದಿ ವಾಹಿನಿ ಏಷಿಯಾನೆಟ್ ಸುವರ್ಣ ನ್ಯೂಸ್ ನಿಂದ ಕೊಡಮಾಡುವ ರಾಜ್ಯ ಮಟ್ಟದ” ಕರ್ನಾಟಕ ಸಹಕಾರ ಶಿರೋಮಣಿ 2025″ ಎಂಬ ಪ್ರಶಸ್ತಿಗೆ ದಕ್ಷಿಣ ಕನ್ನಡ ಜೆಲ್ಲೆಯಿಂದ ಆಯ್ಕೆಯಾಗಿ ಪ್ರಶಸ್ತಿ ಪಡೆದಿರುವ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರನ್ನು ಕುಕ್ಕಿಪಾಡಿ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಶೆಟ್ಟಿ, ಉಪಾಧ್ಯಕ್ಷೆ ಬೇಬಿ ಪೂಜಾರಿ ದೇವಸ, ಸದಸ್ಯರಾದ ಲಿಂಗಪ್ಪ ಪೂಜಾರಿ, ಯೋಗೀಶ್ ಆಚಾರ್ಯ, ದಿನೇಶ್ ಸುಂದರ ಶಾಂತಿ, ಚಂದ್ರ ಪೂಜಾರಿ, ಸುಜಾತಾ ಪೂಜಾರಿ,ಪ್ರತಿಭಾ ಶೆಟ್ಟಿ,ಶೋಭಾ ಕುಲಾಲ್, ಪುಷ್ಪ, ಗೀತಾ ನಾಯ್ಕ್ ಪೂರ್ಣಿಮಾ ರವಿರಾಜ್ ಕಾರ್ಯದರ್ಶಿ ಪ್ರೇಮಾ ನಾಯ್ಕ್, ಸಿ. ಎ. ಬ್ಯಾಂಕ್ ನಿರ್ದೇಶಕ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್ ಸ್ವಾಗತಿಸಿ ಧನ್ಯವಾದ ವಿತ್ತರು.

Leave a Reply

Your email address will not be published. Required fields are marked *