Breaking
12 Feb 2026, Thu

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗೇರು ತೋಟಕ್ಕೆ ಬೆಂಕಿ: 25 ಕ್ಕೂ ಹೆಚ್ಚು ಮರ ಸುಟ್ಟು ಭಸ್ಮ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಫೆ. 10ರಂದು ಮಧ್ಯಾಹ್ನ ಸಂಭವಿಸಿದೆ.

ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಅವರಿಗೆ ಸೇರಿದ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್‌ನಿಂದ ಕಿಡಿಗಳು ಉಂಟಾಗಿ, ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ 25ಕ್ಕೂ ಅಧಿಕ ಗೇರು ಮರಗಳು ಸುಟ್ಟು ಭಸ್ಮವಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *