ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ). ತುಂಬೆ ವಲಯ ಕಳ್ಳಿಗೆ ಕಾರ್ಯಕ್ಷೇತ್ರದ ನಂದಾದೀಪ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಪದ್ಮಾವತಿಯವರ ತಾಯಿಯಾದ ಶ್ರೀಮತಿ ಕಮಲ ಇವರಿಗೆ ಅನಾರೋಗ್ಯದ ನಿಮಿತ್ತ ಉಚಿತವಾಗಿ ವಾಟರ್ ಬೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತುಂಬೆ ವಲಯದ ಮೇಲ್ವಿಚಾರಕಿ ಮಮತಾ, ಸೇವಾ ಪ್ರತಿನಿಧಿ ಪ್ರೀತಿ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ, ಶ್ರೀಯುತ ತಾರಾನಾಥ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.








