ಬೆಳ್ತಂಗಡಿ: 5 ವರ್ಷಗಳಿಂದ ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಕಾಪು ನಿವಾಸಿ ಮಣಿಕಂಠ (35) ಎಂದು ಗುರುತಿಸಲಾಗಿದೆ.

2019 ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ಬೆಳ್ತಂಗಡಿ ನ್ಯಾಯಾಲಯವು ವಾರಂಟ್ ಕೂಡ ಹೊರಡಿಸಿತ್ತು . ಬಳಿಕ ಪ್ರಕರಣದ ತನಿಖೆ ಕೈಗೊಂಡ ವೇಣೂರು ಪೊಲೀಸರು ಆರೋಪಿಯನ್ನು ಇದೀಗ ಪತ್ತೆ ಹಚ್ಚಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.







