Breaking
22 Mar 2026, Sun

ತಾಲೂಕುಮಟ್ಟದ “ಕೋಟಿ ಚೆನ್ನಯ ಕ್ರೀಡೋತ್ಸವ-2025” ರ ಲಾಂಛನ ಹಾಗೂ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಬಂಟ್ವಾಳ ‌ತಾಲೂಕು‌ ಬಿಲ್ಲವ ಸೇವಾ ಸಂಘ ರಿ.ಗಾಣದಪಡ್ಪು ಬಿಸಿರೋಡು ಇದರ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025 ಇದರ ಲಾಂಛನ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ.ಸುವರ್ಣ ಲಾಂಛನ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು ಬಹಳ ಅರ್ಥಪೂರ್ಣವಾಗಿ ಕೋಟಿಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆಯಾಗಿದೆ, ಮುಂದೆ ನಡೆಯುವ ಕ್ರೀಡೋತ್ಸವ ಕಾರ್ಯಕ್ರಮವೂ ಅತ್ಯಂತ ಯಶಸ್ವಿಯಾಗಿ ನಡೆಯುವಂತೆ ಸಮಿತಿಯ ಜೊತೆ ಸಮಾಜದ ಬಾಂದವರು ಜೊತೆಯಾಗಿ ಎಂದು ತಿಳಿಸಿದರು.

ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ, ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್ ,ಕೋಶಾಧಿಕಾರಿ ಆನಂದ ಶಂಭೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ರೀಡೋತ್ಸವದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ಕೋಟಿ ಚೆನ್ನಯ್ಯ ಕ್ರಿಡೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕ್ರೀಡಾಕೂಟದ ವಿವರ ನೀಡಿದರು.

ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *