ಬೆಂಗಳೂರು: ಬೆಂಗಳೂರು ಕರಗದ ಪ್ರಯುಕ್ತ ಸುಂಕದಕಟ್ಟೆ ಕೆಬ್ಬೆಹಳ್ಳದ ಶ್ರೀ ಪಂಚಮುಖಿ ಗಾಯತ್ರಿ ದೇವಾಲಯ ಟ್ರಸ್ಟ್ (ರಿ) ವತಿಯಿಂದ ಮಜ್ಜಿಗೆ ಮತ್ತು ಪಾನಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಬಿ.ಜಿ. ರಂಗಸ್ವಾಮಿ, ಮಾಜಿ ನಗರ ಪಾಲಿಕೆ ಸದಸ್ಯ ಗೋವಿಂದರಾಜು, ಬಿಜೆಪಿ ಮುಖಂಡ ಹೆಚ್.ಸಿ. ಮಂಜುನಾಥ್, ಬೆಂಗಳೂರು ಡ್ರಗ್ಸ್ ಅಸೋಸಿಯೇಷನ್ ಅಧ್ಯಕ್ಷ ಮಾಯಣ್ಣ, ಕನ್ನಡಿಗರ ಧ್ವನಿ ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು, ಸ್ನೇಹಿತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.




