ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬೋಳಂತೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೋಳಂತೂರು ಗ್ರಾಮದ ಬೀರುಕೋಡಿ ಹಿಂದೂ ರುದ್ರಭೂಮಿಯಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಜೂನ್ 5ರ ಶುಕ್ರವಾರದಂದು ನಡೆಸಲಾಯಿತು.

ಕಾರ್ಯಕ್ರಮಕ್ಕೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದ ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿ, ನಾಟಿ ಮಾಡಿದ ಗಿಡಗಳ ಪೋಷಣೆ ಬಹಳ ಮುಖ್ಯ, ಈ ದೃಷ್ಟಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾದರಿಯಾಗಿದ್ದು, ಮೋಕ್ಷದಾಮದ ಸುತ್ತಮುತ್ತಲು ನೆಟ್ಟ ಹಣ್ಣು ಹಂಪಲಿನ ಗಿಡಗಳಿಂದಾಗಿ ಪ್ರಕೃತಿಯಲ್ಲಿರುವ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತಾಗಿ ಇದೊಂದು ಸುಂದರ ಧಾಮವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಹಿಂದೂ ರುದ್ರಭೂಮಿ ಅಧ್ಯಕ್ಷ ಚಂದ್ರಶೇಖರ ರೈ, ಜನಜಾಗೃತಿ ವೇದಿಕೆಯ ಕಲ್ಲಡ್ಕ ವಲಯ ಅಧ್ಯಕ್ಷ ಬಟ್ಯಪ್ಪ ಶೆಟ್ಟಿ, ಭಜನಾ ಪರಿಷತ್ತಿನ ಕಲ್ಲಡ್ಕ ವಲಯ ಅಧ್ಯಕ್ಷ ಜಯರಾಮ್ ರೈ, ಪಂಚಾಯತ್ ಕಾರ್ಯದರ್ಶಿ ಅಶ್ರಫ್, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ಬೋಳಂತೂರು ಒಕ್ಕೂಟ ಅಧ್ಯಕ್ಷೆ ಸೀತಾ, ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಹಿಂದೂ ರುದ್ರಭೂಮಿ ಸಮಿತಿ ಸದಸ್ಯರಾದ ಜಿ.ಎನ್. ನೊಣಯ್ಯ ಮತ್ತು ವಿಶ್ವನಾಥ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸಂಯೋಜಕಿ ವಿದ್ಯಾ, ಶೌರ್ಯ ಘಟಕದ ನಿಯೋಜಿತ ಅಧ್ಯಕ್ಷ ಗಣೇಶ್ ಹಾಗೂ ಸದಸ್ಯರಾದ ರವಿಚಂದ್ರ, ಚಿನ್ನಾ ಕಲ್ಲಡ್ಕ, ಒಕ್ಕೂಟ ಸೇವಾಪ್ರತಿನಿಧಿ ಲೀಲಾವತಿ, ಒಕ್ಕೂಟ ದ ಪದಾಧಿಕಾರಿಗಳು, ಸಂಘ ದ ಸದಸ್ಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.




