ಬಂಟ್ವಾಳ: ಅನಂತ ಚತುರ್ದಶಿ ವ್ರತ ಪರ್ವಕಾಲದಲ್ಲಿ ಸಾರ್ವಜನಿಕರಿಗೆ ತೆನೆ ಹಬ್ಬದ ಅಂಗವಾಗಿ ಭತ್ತದ ಕೊರಳು ವಿತರಿಸುವ ಉದ್ದೇಶದಿಂದ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಸಜೀಪ ನಡು ಶ್ರೀ ಕ್ಷೇತ್ರದ ದೇವಾಲಯದ ವಠಾರದಲ್ಲಿ ಭತ್ತದ ಬೆಳೆ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೆ. ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ., ಕಿಶನ್ ಸೇಣವ, ರಾಮ ಬರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.




