ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಗಣೇಶ್ ಮೆಡಿಕಲ್ ಎದುರಿನ ಕಾಲುದಾರಿಗೆ ಅಳವಡಿಸಿದ್ದ ಒಳಚರಂಡಿಯ ಕಾಂಕ್ರೀಟ್ ಸ್ಲ್ಯಾಬ್ ಮುರಿದು ಬಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಪ್ರದೇಶದಲ್ಲಿ ಪ್ರತಿದಿನ ನೂರಾರು ಮಂದಿ ಪಾದಚಾರಿಗಳು ಸಂಚರಿಸುತ್ತಿದ್ದು, ಮುರಿದಿರುವ ಕಾಂಕ್ರೀಟ್ನಿಂದ ಅಪಘಾತ ಸಂಭವಿಸುವ ಭೀತಿ ವ್ಯಕ್ತವಾಗಿದೆ.

ಸ್ಥಳೀಯರ ಪ್ರಕಾರ, ಈ ಸಮಸ್ಯೆ ಹಲವು ದಿನಗಳಿಂದ ಮುಂದುವರಿದಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ತಕ್ಷಣವೇ ಮುರಿದಿರುವ ಕಾಂಕ್ರೀಟ್ ಸ್ಲ್ಯಾಬ್ ದುರಸ್ತಿ ಮಾಡಿ ಸಾರ್ವಜನಿಕರ ಸುರಕ್ಷತೆ ಕಾಪಾಡಲು ಸಂಬಂಧಪಟ್ಟ ಇಲಾಖೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


