Breaking
3 Sep 2026, Thu

ಮಧ್ವ ಮಂಟಪಕ್ಕೆ ಪೇಜಾವರ ಶ್ರೀಗಳ ಭೇಟಿ; ಓಂಕಾರ ಫ್ರೆಂಡ್ಸ್ ವತಿಯಿಂದ ಪಾದಪೂಜೆ, ಧಾರ್ಮಿಕ ಚಟುವಟಿಕೆಗಳಿಗೆ ಮನವಿ

ಬಂಟ್ವಾಳ: ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೋಮವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿ ಭಕ್ತರಿಗೆ ಆಶೀರ್ವಚನ ನೀಡಿದರು.


ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ (ರಿ.) ಹಾಗೂ ಓಂಕಾರ ಮಹಿಳಾ ಘಟಕ, ಮಧ್ವ ವತಿಯಿಂದ ಶ್ರೀಗಳಿಗೆ ಭಕ್ತಿಭಾವದಿಂದ ಪಾದಪೂಜೆ ಸಲ್ಲಿಸಿ ಗೌರವಿಸಲಾಯಿತು.


ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಲು ಸ್ಥಳಾವಕಾಶ ಕಲ್ಪಿಸಬೇಕೆಂದು ಸಂಘದ ವತಿಯಿಂದ ಶ್ರೀಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಪೇಜಾವರ ಶ್ರೀಗಳು ಶುಭ ಹಾರೈಸಿ ಆಶೀರ್ವಾದ ನೀಡಿದರು.


ಕಾರ್ಯಕ್ರಮದಲ್ಲಿ ಶ್ರೀ ಮಧ್ವ ಮಂಟಪದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್ ಮಠ, ಮದ್ದಡ್ಕ, ಓಂಕಾರ ಫ್ರೆಂಡ್ಸ್ (ರಿ.) ಹಾಗೂ ಓಂಕಾರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು, ಭಕ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *