Breaking
21 Jul 2026, Tue

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ‘ಆಟಿದ ಪೊಲಬು’ ಕಾರ್ಯಕ್ರಮ ಯಶಸ್ವಿ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ನ ಪುಂಜಾಲಕಟ್ಟೆ ಘಟಕದ ಆಶ್ರಯದಲ್ಲಿ ‘ಆಟಿದ ಪೊಲಬು’ ಕಾರ್ಯಕ್ರಮವು ರವಿವಾರ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಆಟಿ ತಿಂಗಳ ಮಹತ್ವ, ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ವಿವಿಧ ಸ್ಪರ್ಧೆಗಳ ಮೂಲಕ ಕಾರ್ಯಕ್ರಮ ಗಮನ ಸೆಳೆಯಿತು.


ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು, ಆಟಿ ತಿಂಗಳು ಆರೋಗ್ಯ ಸಂರಕ್ಷಣೆ ಮತ್ತು ಪ್ರಕೃತಿ ಆಧಾರಿತ ಜೀವನಶೈಲಿಯನ್ನು ನೆನಪಿಸುವ ವಿಶಿಷ್ಟ ಕಾಲಘಟ್ಟವಾಗಿದೆ ಎಂದು ಹೇಳಿದರು. ನಮ್ಮ ಹಿರಿಯರು ಹಸಿವು ಮತ್ತು ಆರೋಗ್ಯ ರಕ್ಷಣೆಗೆ ಗಿಡಮೂಲಿಕೆಗಳು ಹಾಗೂ ಪ್ರಕೃತಿದತ್ತ ಆಹಾರಗಳನ್ನು ಬಳಸುತ್ತಿದ್ದರು. ಆಟಿ ತಿಂಗಳ ಆಹಾರ ಪದ್ಧತಿ ದೇಹ ಮತ್ತು ಮನಸ್ಸಿನ ಶುದ್ಧತೆಗೆ ಸಹಕಾರಿಯಾಗುತ್ತಿತ್ತು.

ಹಿರಿಯರು ಗೆಡ್ಡೆ-ಗೆಣಸು ಹಾಗೂ ವಿವಿಧ ಸಸ್ಯಗಳಲ್ಲಿ ಆಹಾರವನ್ನು ಕಂಡುಹಿಡಿದ ಜೀವನ ಹೋರಾಟವನ್ನು ನಾವು ಸ್ಮರಿಸಬೇಕು ಎಂದು ಹೇಳಿದರು. ಬದಲಾವಣೆ ಅನಿವಾರ್ಯವಾದರೂ, ಕಳೆದುಕೊಂಡಿರುವುದರ ಬಗ್ಗೆ ಚಿಂತಿಸುವ ಬದಲು ಪಡೆದಿರುವುದರ ಬಗ್ಗೆ ಸಂತೋಷಪಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಬಿ.ಸಿ.ರೋಡ್ನ ನ್ಯಾಯವಾದಿ ಶೈಲಜಾ ರಾಜೇಶ್ ಮಾತನಾಡಿ, ಆಟಿ ತಿಂಗಳ ಸಾಂಪ್ರದಾಯಿಕ ತಿಂಡಿ-ತಿನಿಸುಗಳಲ್ಲಿ ಔಷಧೀಯ ಗುಣಗಳಿದ್ದು, ಹಿರಿಯರು ರೂಪಿಸಿದ ಆಹಾರ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಹರೀಂದ್ರ ಟಿ. ಪೈ ಮಾತನಾಡಿ, ಆಟಿ ತಿಂಗಳ ಮಹತ್ವವನ್ನು ಯುವಜನತೆ ಮತ್ತು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ., ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ್ ಪ್ರಭು ಮೂರ್ಜೆ, ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಕಾರ್ಯದರ್ಶಿ ಧರ್ಣಪ್ಪ ಗೌಡ ಹಟ್ಟತ್ತೋಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿ ಲಕ್ಷ್ಮಿ ಸಂಜೀವ ಶೆಟ್ಟಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಉಮಾ ಡಿ. ಗೌಡ, ಅಧ್ಯಕ್ಷೆ ಶಶಿಕಲಾ ಗೋಪಾಲ ಪೂಜಾರಿ, ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಸಲಹೆಗಾರ ದಿನೇಶ್ ಶೆಟ್ಟಿ ಕಾವಳಕಟ್ಟೆ, ಉಪಾಧ್ಯಕ್ಷ ದಿವಾಕರ ದಾಸ್ ಹಾಗೂ ಘಟಕದ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.


ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ಆಚಾರ್ಯ ಬೆರ್ಕಳ ವಂದಿಸಿದರು. ರೇಖಾ ಶೆಟ್ಟಿ ಬಹುಮಾನ ವಿಜೇತರ ವಿವರ ವಾಚಿಸಿದರು. ಕಲಾವಿದ ಎಚ್.ಕೆ. ನೈನಾಡು ಕಾರ್ಯಕ್ರಮ ನಿರೂಪಿಸಿದರು.


ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿ ಲಕ್ಷ್ಮಿ ಸಂಜೀವ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಫೌಂಡೇಶನ್ ಟ್ರಸ್ಟಿ ವಸಂತ ಶೆಟ್ಟಿ ಕೇದಗೆ, ಗೌರವ ಸಲಹೆಗಾರ ಯಶೋಧರ ಶೆಟ್ಟಿ ದಂಡೆ, ಅಧ್ಯಕ್ಷ ಹರೀಂದ್ರ ಟಿ. ಪೈ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಗೋಪಾಲ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *