Breaking
15 Aug 2026, Sat

ಬಿ.ಸಿ.ರೋಡ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಧೈರ್ಯ ತೋರಿದ ವಿದ್ಯಾರ್ಥಿ ಮನ್ವಿತ್‌ಗೆ ಸನ್ಮಾನ

ಬಂಟ್ವಾಳ: ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ಆ. 15ರಂದು ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ಅವರನ್ನು ಸನ್ಮಾನಿಸಲಾಯಿತು. ಅಪಾಯದ ಸಂದರ್ಭದಲ್ಲಿ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸ್ಪಂದಿಸಿ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಲು ನೆರವಾದ ಮನ್ವಿತ್ ಅವರ ಜಾಗರೂಕತೆಯನ್ನು ಶ್ಲಾಘಿಸಲಾಯಿತು.

ವಯಸ್ಸು ಚಿಕ್ಕದಾದರೂ ಧೈರ್ಯ ಹಾಗೂ ಜವಾಬ್ದಾರಿಯುತ ನಡೆ ತೋರಿದ ಮನ್ವಿತ್ ಅವರ ಕಾರ್ಯಕ್ಕೆ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.

ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಅಭಿವೃದ್ಧಿಗಾಗಿ ಎಲ್ಲರೂ ಬದ್ಧರಾಗುವ ಸಂಕಲ್ಪ ಕೈಗೊಳ್ಳಲಾಯಿತು.

Leave a Reply

Your email address will not be published. Required fields are marked *