ಬೆಳ್ತಂಗಡಿ: ಶಾಸಕರಾದ ಹರೀಶ್ ಪೂಂಜಾ ಅವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ವಿಪ್ರ ಬ್ರಾಹ್ಮಣ ಸಮಾಜ ವೇಣೂರು ವಲಯ ಹಾಗೂ ನಿಕಟಪೂರ್ವ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ, ಪಡಂಗಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ವಿಪ್ರ ಬ್ರಾಹ್ಮಣ ಸಮಾಜದ ವತಿಯಿಂದ ಸಲ್ಲಿಸಲಾದ ಗೌರವಾರ್ಪಣೆಯನ್ನು ಶಾಸಕ ಹರೀಶ್ ಪೂಂಜಾ ಅವರು ಗೌರವಪೂರ್ವಕವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ಪ್ರಮುಖರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.








