Breaking
18 Aug 2026, Tue

ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ 3.80 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ 38 ಕುಟುಂಬದ ನಾಮಿನಿ ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.3.80 ಲಕ್ಷ ರೈತ ಕಲ್ಯಾಣ ನಿಧಿಯನ್ನು ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತಾನಾಡಿ, ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ, ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ ಶಿವ ಗೌಡ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ,ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Leave a Reply

Your email address will not be published. Required fields are marked *