ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಇಂದು (ಆ.26) ನಡೆಯಲಿದೆ.

ಕಾರ್ಯಕ್ರಮವು ಬೆಳಗ್ಗೆ 10.30ಕ್ಕೆ ಸಂಘದ ರೈತ ಸಭಾಭವನದಲ್ಲಿ ನಡೆಯಲಿದ್ದು, ಸಂಘದ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




