ಬಂಟ್ವಾಳ : ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ ಮನೆಗೆ ಬೆಂಕಿ ತಗುಲಿದ ಘಟನೆ ತಡ ರಾತ್ರಿ 1ಗಂಟೆಗೆ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಆರಂಭಿಸಿತ್ತು. ಶಾಸಕ ರಾಜೇಶ್ ನಾಯ್ಕ್ ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿ, ಮನೆಮಂದಿಗೆ ಸಾಂತ್ವನ ಹೇಳಿದರು. ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಾಗಿದೆ.




