Breaking
6 May 2026, Wed

ಮಲ್ಪೆಯ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳವು

ಉಡುಪಿ: ದೈವಸ್ಥಾನದ ಡಬ್ಬಿ ಒಡೆದು ಕಳ್ಳತನ ಮಾಡಿರುವ ಘಟನೆ ಉಡುಪಿಯ ಮಲ್ಪೆಯಲ್ಲಿರುವ ಕೊಡವೂರು ಸಮೀಪದ ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಎಂಬಲ್ಲಿ ನಡೆದಿದೆ.

ಇಲ್ಲಿನ ಆವರಣ ಗೋಡೆಯ ಹೊರಭಾಗದಲ್ಲಿ ಇಟ್ಟಿದಂತಹ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಸುಮಾರು 12 ಸಾವಿರ ಹಣವನ್ನು ಕಳವು ಮಾಡಿ ಖದೀಮರು ಪರಾರಿಯಾಗಿದ್ದಾರೆ ಅನ್ನುವ ಮಾಹಿತಿ ಇದೆ.

ಎ.19 ರಂದು ಸಂಜೆ 6 ರಿಂದ 8.45 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ.

ಮಲ್ಪೆ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *