ಕೆಯ್ಯೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿ ಆರ್ ಸಿ ಕಾಲನಿ ಬಳಿ ಇಂದು (ಎ.29) ರ ಬೆಳಗ್ಗೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಅರ್ತಿಯಡ್ಕದ ನಿವಾಸಿ ಎಂದು ಗುರುತಿಸಿಲಾಗಿದೆ.
ರಬ್ಬರ್ ಟ್ಯಾಪಿಂಗ್ಗೆಂದು ತೆರಳಿದ್ದ ಮಹಿಳೆಯ ಮೇಲೆ ಮುಂಜಾನೆ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

