ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನರಿಕೊಂಬು ಕುಂಬಾರರ ಯಾನೆ ಕುಲಾಲರ ಸಂಘ (ರಿ.) ಮತ್ತು ಮಹಿಳಾ ಘಟಕ ಇದರ ಕುಲಾಲ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 4-5-2025 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9 ರಿಂದ ನೆರವೇರಲಿರುವುದು.
ಬೆಳಿಗ್ಗೆ ಗಂಟೆ 9 ಕ್ಕೆ ಆಕರ್ಷಕ ಕೀಲುಕುದುರೆ, ಗೊಂಬೆ ಕುಣಿತ, ಕೇರಳದ ಚೆಂಡೆ ವಾದ್ಯ, ಕುಣಿತ ಭಜನಾ ತಂಡ ಹಾಗೂ ಪೂರ್ಣ ಕುಟುಂಬದೊಂದಿಗೆ ಅದ್ದೂರಿಯ ಮೆರವಣಿಗೆ ನಡೆದು ಮಾಣಿಲ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಸಮುದಾಯ ಭವನದ ಶಿಲನ್ಯಾಸ ಕಾರ್ಯಕ್ರಮ ನಡೆಯಲಿದ್ದು, ನಂತರ ನರಿಕೊಂಬು ಕುಂಬಾರ ಯಾನೆ ಕುಲಾಲರ ಸಂಘದ ಅಧ್ಯಕ್ಷರಾದ ಎಂ ಪಿ ಸುಂದರ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಮಾಡಲಿದ್ದು. ಪರಮಪೂಜ್ಯ ಮೋಹನ್ ದಾಸ್ ಸ್ವಾಮೀಜಿ ಆಶೀರ್ವಚನ ನೀಡಲಿರುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಬ್ರಿಜೇಶ್ ಚೌಟ, ವಿಧಾನಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಶಾಸಕ ಭರತ್ ಶೆಟ್ಟಿ, ಮಾಜಿ ಸಚಿವ ರಮನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ, ಮುಂಬೈ ಕುಲಾಲ್ ಸಂಘದ ಅಧ್ಯಕ್ಷ ರಘು ಆರ್ ಮೂಲ್ಯ, ನರಿಕೊಂಬು ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ಮುಂಬೈ ಮಹಿಳಾ ಸಂಘದ ಅಧ್ಯಕ್ಷ ಮಮತಾ ಗುಜರನ್, ದಕ್ಷಿಣ ಕನ್ನಡ ಜಿಲ್ಲಾ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಮತ ಎ ಕುಲಾಲ್, ಕರ್ನಾಟಕ ರಾಜ್ಯ ಕುಲಾಲ್ ಯುವ ವೇದಿಕೆಯ ರಾಜ್ಯ ಅಧ್ಯಕ್ಷ ಗಂಗಾಧರ ಬಂಜನ್, ಬಂಟ್ವಾಳ ತಾಲೂಕು ಕುಲಾಲ್ ಸಂಘದ ಅಧ್ಯಕ್ಷ ಬಿ ಕೃಷ್ಣಪ್ಪ, ಶ್ರೀ ವೀರನಾರಾಯಣ ದೇವಸ್ಥಾನ ಶಕ್ತಿನಗರ ಅಧ್ಯಕ್ಷ ಸುಂದರ ಕುಲಾಲ್, ನ್ಯೂ ವೆಲ್ಸ್ ಮಹಾ ನಗರ ಪಾಲಿಕೆ ಮುಂಬೈ ಸ್ಥಾಯಿ ಸಮಿತಿಯ ಅಧ್ಯಕ್ಷ ಸಂತೋಷ್ ಜೆ ಶೆಟ್ಟಿ, ಕುಲಾಲ್ ಸಂಘ ಬೆಂಗಳೂರು ಅಧ್ಯಕ್ಷ ದಿವಾಕರ ಮೂಲ್ಯ , ಜ್ಯೋತಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಗಿರೀಶ್ ಸಾಲಿಯಾನ್, ಮುಂಬೈ ಉದ್ಯಮಿ ಸುನಿಲ್ ಆರ್ ಸಾಲಿಯಾನ್, ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದ ಸೇವ ಸಮಿತಿ ಅಧ್ಯಕ್ಷ ಕಿರಣ್ ಅಟ್ಲೂರು, ಮುಂಬೈ ಮಲ್ಲ ದಿನಪತ್ರಿಕೆ ಸಂಪಾದಕ ದಿನೇಶ್ ಕುಲಾಲ್, ನಂದ ಟೆಕ್ಸ್ ಟೈಲ್ಸ್ ನಾಸಿಕ್ ನ ಆಡಳಿತ ನಿರ್ದೇಶಕ ರಘುನಾಥ ಬಂಗೇರ, ಬಂಟ್ವಾಳ ಸಮಾಜ ಸೇವ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ, ಮಂಗಳೂರು ಮಂಗಳ ಜ್ಯೋತಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್, ಉದ್ಯಮಿ ಯು ರಾಮ ಉಪ್ಪಿನಂಗಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮಹಾಬಲ ಕುಲಾಲ್, ಬ್ಯಾಂಕ್ ಆಫ್ ಬರೋಡ ಎಜಿಎಂ ಬಿ ಸುನಿಲ್ ಕುಮಾರ್ ಮೊದಲಾದವರು ಭಾಗವಹಿಸಲಿರುವರು.
ಈ ಕಾರ್ಯಕ್ರಮದ ನಿಮಿತ್ತ ಗುರುಗಳಾದ ವಿದುಷಿ ನಾಯನ ಸತ್ಯನಾರಾಯಣ ಹಾಗೂ ವಿದುಷಿ ಅಶ್ವಿನಿ ಹೊಳ್ಳ ರವರ ಶಿಷ್ಯರಿಂದ ಭರತನಾಟ್ಯ, ವಿಠಲ ನಾಯಕ್ ರವರಿಂದ ಗೀತಾ -ಸಾಹಿತ್ಯ, ಸಂಭ್ರಮ ಜರಗಲಿರುವುದು. ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿರುವುದು.
ಸಾಯಂಕಾಲ ಗಂಟೆ 3ಕ್ಕೆ ಸರಿಯಾಗಿ ಮಕ್ಕಳಿಂದ ಹಾಗೂ ಊರವರಿಂದ ಮನರಂಜನ ಕಾರ್ಯಕ್ರಮ, ಚಿಂತಾಮಣಿ ಡ್ಯಾನ್ಸ್ ಗ್ರೂಪ್ ಕಡೇಶಿವಾಲಯ ತಂಡದಿಂದ ಡ್ಯಾನ್ಸ್ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಗಂಟೆ 7:30ಕ್ಕೆ ಸರಿಯಾಗಿ ನರಿ ಕೊಂಬು ಕುಂಬಾರರ ಯಾನೆ ಕುಲಾಲರ ಕಟ್ಟಡ ಸಮಿತಿ ಅಧ್ಯಕ್ಷ ನಾಗೇಶ್ ಕುಲಾಲ್ ನರಿಕೊಂಬು ರವರ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನ ನಡುಬೆಟ್ಟುವಿನ ಧರ್ಮದರ್ಶಿ ಶ್ರೀ ರವಿ ಯನ್ ಆಶೀರ್ವಚನ ನೀಡಲಿರುವರು.
ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ರೈ, ಕಾರ್ಕಳ ಶಾಸಕ ಸುನಿಲ್ ಕುಮಾರ್, ದಾಸ್ ಪ್ರಮೋಷನ್ ಮ್ಯಾನೇಜಿಂಗ್ ಡೈರೆಕ್ಟರ್ ಅನಿಲ್ ದಾಸ್, ರಾಜ್ಯ ಕುಂಬಾರರ ಮಹಾ ಸಂಘದ ಕಾರ್ಯಧ್ಯಕ್ಷರಾದ ಅಣ್ಣಯ್ಯ ಕುಲಾಲ್, ಬಿಜೆಪಿ ದಕ್ಷಿಣ ಕನ್ನಡ ಕಾರ್ಯಕಾರಿಣಿ ಸಮಿತಿಯ ಸಂದೇಶ್ ಶೆಟ್ಟಿ ಅರೆಬೆಟ್ಟು, ಗುರು ಬೆಳದಿಂಗಳು ಫೌಂಡೇಶನ್ ಕುದ್ರೋಳಿ ಅಧ್ಯಕ್ಷ ಪದ್ಮನಾಭ ಆರ್ ಪೂಜಾರಿ, ಶ್ರೀದೇವಿ ದೇವಸ್ಥಾನ ಪೊಲೀಸ್ ಲೈನ್ ಅಧ್ಯಕ್ಷ ಸದಾಶಿವ ಕುಲಾಲ್, ಬೆಂಗಳೂರುಉದ್ಯಮಿ ಸೌಂದರ್ಯ ರಮೇಶ್, ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಚಂದಪ್ಪ ಮೂಲ್ಯ, ಧರ್ಮಶಾಸ್ತ್ರ ಭಜನಾ ಮಂದಿರ ಕುಲಶೇಖರ ಅಧ್ಯಕ್ಷ ರಾಮಪ್ರಸಾದ್, ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ ಕುಲಾಲ್, ನಾಸಿಕ್ ಕುಲಾಲ್ ಸಂಘದ ಅಧ್ಯಕ್ಷ ಜಗನ್ನಾಥ್ ಸಾಲಿಯಾನ್, ಕುಲಾಲ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಸುರೇಶ್ ಬಿ ಕುಲಾಲ್, ಬೆಂಗಳೂರು ಉದ್ಯಮಿ ಉಮೇಶ್ ಬಂಗೇರ, ನರಿಕೊಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹಿನಿವಾಮನ, ನರಿ ಕೊಂಬು ಕುಲಾಲ್ ಸಂಘದ ಮಹಿಳಾ ಘಟಕ ಅಧ್ಯಕ್ಷ ಮಾಲತಿ ಕರುಣಾಕರ್, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸಚಿನ್, ನಾಸಿಕ್ ಹೋಟೆಲ್ ಉದ್ಯಮಿ ಸಚಿನ್ ಬಂಗೇರ, ಕಾಸರಗೋಡು ಕುಲಾಲ್ ಸಂಘದ ಅಧ್ಯಕ್ಷ ರವೀಂದ್ರ ಮುನ್ನಿಪಾಡಿ, ವೀರನಾರಾಯಣ ದೇವಸ್ಥಾನ ಮಂಗಳೂರು ಆಡಳಿತ ಮುಕ್ತೇಸರ ಪುರುಷೋತ್ತಮ ಕಲ್ಪಾವಿ, ಜಿಲ್ಲಾ ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟ್ವಾಳ ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕೋಳಿ ಸಾಕಣೆದಾರರ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಅಡ್ಯಾರ, ಬೆಂಗಳೂರು ಕುಲಾಲ ಸಂಘದ ಮಾಜಿ ಅಧ್ಯಕ್ಷ ಪುರುಷೋತ್ತಮ ಚೆಂಡ್ಲಾ, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಮಳಲಿ ಯ ಸುಂದರ ಬಂಗೇರ, ನರಿ ಕಂಬು ನಾಲ್ಕೈಥಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ್ ಬಂಗೇರ ನಿರ್ಮಾಲ್, ಉದ್ಯಮಿ ದಿನೇಶ್ ಮಂಗಳೂರು, ನಿವೃತ್ತ ಪ್ರಾಚಾರ್ಯ ಎಂ ಪಿ ಬಂಗೇರ ಮೊದಲಾದವರು ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿ ನಂತರ ಕಲಾ ಕುಂಭ ಕುಳಾಯಿ ಕುಡ್ಲ ಇವರಿಂದ ತುಳು ನಾಟಕ “ಪರಮಾತ್ಮ ಪಂಜುರ್ಲಿ ” ಜರಗಲಿರುವುದು ಎಂದು ನರಿಕೊಂಬು ಕುಂಬಾರ ಯಾನೆ ಕುಲರ ಸಂಘ( ರಿ.) ಹಾಗೂ ಮಹಿಳಾ ಘಟಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


