Breaking
3 Jun 2025, Tue

ತ‌ನ್ನದೆ ಮನೆಗೆ ಬೆಂಕಿ‌ ಇಟ್ಟು ಕುಡುಕನ ಅವಾಂತರ : ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಉಡುಪಿ: ನಗರದ ಹೊರವಲಯದ ಚಿಟ್ಪಾಡಿಯಲ್ಲಿ ವ್ಯಕ್ತಿಯೊಬ್ಬ ಕಂಟಪೂತಿ೯ ಕುಡಿದು ತ‌ನ್ನದೆ ಮನೆಗೆ ಬೆಂಕಿ‌ ಇಟ್ಟು, ಅವಾಂತರ ಉಂಟು ಮಾಡಿದ ಘಟನೆ ಮೇ 11ರಂದು ನಡೆದಿದೆ.

ಕುಡುಕನ ರಂಪಾಟ ಮತ್ತು ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ತಕ್ಷಣ ಸ್ಥಳಕ್ಕೆ ಬಂದ ಒಳಕಾಡುವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.
ಬಳಿಕ ಒಳಕಾಡುವರು ಕುಡುಕನ‌‌ ಮನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *