ಲಾಯಿಲದಲ್ಲಿ ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ

ಬೆಳ್ತಂಗಡಿ: ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದ ಪ್ರಸನ್ನ ಕಾಲೇಜು ಸಮೀಪ ಮೇ.13 ತಡರಾತ್ರಿ ನಡೆದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ ರಸ್ತೆ ಬದಿಯಿರುವ ಚರಂಡಿ ಹೋಗಿ ಬಿದ್ದಿದೆ ಎನ್ನಲಾಗಿದೆ.

ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ವಾಹನ ಮತ್ತು ಪಾದಚಾರಿಗಳಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *