Breaking
21 Mar 2026, Sat

ಭಾರತದ ಮೇಲಿನ 3 ದಾಳಿಗಳ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ನ ಹತ್ಯೆ

ಬೆಂಗಳೂರು: ಭಾರತದಲ್ಲಿ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್ನನ್ನು ಹತ್ಯೆ ಮಾಡಲಾಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಕೆಲವು ಅಪರಿಚಿತ ಬಂಧೂಕುದಾರಿಗಳು ಸೈಫುಲ್ಲಾ ಖಾಲಿದ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

2001ರಲ್ಲಿ ರಾಂಪುರದಲ್ಲಿ ಸಿಆರ್ಪಿಎಫ್ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಕಾಂಗ್ರೆಸ್ ಮೇಲಿನ ದಾಳಿ ಮತ್ತು 2006ರಲ್ಲಿ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಯ ಮೇಲಿನ ದಾಳಿಯ ಮೂರು ಪ್ರಮುಖ ದಾಳಿಗಳಲ್ಲಿ ಖಾಲಿದ್ ಪ್ರಮುಖ ಪಾತ್ರ ವಹಿಸಿದ್ದ. ಐದು ವರ್ಷಗಳ ಅವಧಿಯಲ್ಲಿ ನಡೆಸಲಾದ ಈ ದಾಳಿಗಳು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತ್ತು.

Leave a Reply

Your email address will not be published. Required fields are marked *