ಮಂಗಳೂರು: ದ.ಕ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಉಳ್ಳಾಲದಲ್ಲಿ ಇಂದು ಭಾರೀ ಮಳೆಯಾಗಿದೆ.
ಇತ್ತ ನಗರದ ಲಾಲ್ ಬಾಗ್ನಲ್ಲಿ ಬೃಹತ್ ಮರವೊಂದು ಧರೆಗುರುಳಿದೆ.
ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಸಂಚಾರ ಮಾಡುವುದಕ್ಕೆ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಯಿತು.
ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ಸುಗಮ ಸಂಚಾರರಕ್ಕೆ ಅನುವು ಮಾಡಿಕೊಟ್ಟರು.


