Breaking
23 Mar 2026, Mon

ಬಂಟರ ಸಂಘ ಬಂಟವಾಳ ತಾಲೂಕು ವಿಂಶತಿ ಸಂಭ್ರಮ: ಉದ್ಘಾಟನಾ ಸಮಾರಂಭ

ಬಂಟ್ವಾಳ: ತಾಲೂಕು ಬಂಟರ ಸಂಘದ ವಿಂಶತಿ ಸಂಭ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ ಬಂಟ ಸಮಾಜದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

ಬಂಟರ ಸಂಘದ ಬಂಟವಾಳ ತಾಲೂಕು ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಡಾ.ಪ್ರಶಾಂತ ಮಾರ್ಲ, ಜಗನ್ನಾಥ ಚೌಟ ಬದಿಗುಡ್ಡೆ, ಲೋಕೇಶ್ ಶೆಟ್ಟಿ ಕುಳ, ರಂಜನ್ ಕುಮಾರ್ ಶೆಟ್ಟಿ ಅರಳ, ಪ್ರತಿಭಾ ರೈ ಪಾಣೆಮಂಗಳೂರು, ರಮಾ ಎಸ್.ಭಂಡಾರಿ, ನಿಶಾನ್ ಆಳ್ವ ಬಿ.ಸಿರೋಡ್ ಮತ್ತಿತರರು ಉಪಸ್ಥಿತಿದ್ದರು.

ಮುಖ್ಯ ಅತಿಥಿಗಳಾಗಿ ರಾಜೇಶ್ ಚೌಟ ಸುಜೀರುಗುತ್ತು,ವಿಶ್ವನಾಥ ಶೆಟ್ಟಿ ಕರ್ನಿರೆ,ಕೆಕೆ ಶೆಟ್ಟಿ ಕುತ್ತಿಕಾರ್, ಕೆಪಿ ಶೆಟ್ಟಿ ಮೊಡಂಕಾಪುಗುತ್ತು, ರಘು ಎಲ್.ಶೆಟ್ಟಿ ಮುಂಬಯಿ, ಸುಧಾಕರ ಶೆಟ್ಟಿ ಮುಗರೋಡಿ, ರೋಹಿತ್ ಶೆಟ್ಟಿ ನಗ್ರಿಗುತ್ತು, ಮಲ್ಲಿಕಾ ಪಕ್ಕಳ ಮಲಾರು,ಅಜಿತ್ ಚೌಟ ದೇವಸ್ಯ, ಅರವಿಂದ ಶೆಟ್ಟಿ ನಡುಮೊಗರುಗುತ್ತು, ಡಾ.ಶಿವಪ್ರಸಾದ್ ಶೆಟ್ಟಿ ಬಿಸಿರೋಡು, ಚಂದ್ರಪ್ರಕಾಶ ಶೆಟ್ಟಿ ತುಂಬೆಗುತ್ತು, ಸತೀಶ್ ಆಳ್ವ ಮುಡಾರೆ, ಡಾ.ಸತ್ಯ ಶಂಕರ್ ಶೆಟ್ಟಿ ಬಿ.ಸಿರೋಡು, ಧೀರಜ್ ನಾಯ್ಕ್ ನಾರ್ಯನಡಿಗುತ್ತು ಮೊದಲಾದವರು ಭಾಗವಹಿಸಿದ್ದರು.

20 ಮಂದಿಸಾಧಕರಿಗೆ ವಿಂಶತಿ ಸನ್ಮಾನ

ಬಿ.ರಾಮನಾಥ ರೈ ಮಾಜಿ ಸಚಿವರು, ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ, ಡಾ.ಸತೀಶ್ ಭಂಡಾರಿ, ರವಿಶಂಕರ ಶೆಟ್ಟಿ ಬಡಾಜೆಗುತ್ತು, ಜಗಜೀವನ ಜಗಜೀವನ ಭಂಡಾರಿ ಅಗರಿ, ವಿಠಲ ರೈ ಬಾಲಾಜಿ ಬೈಲು, ಶೀನಶೆಟ್ಟಿ ವೀರಕಂಭ, ರವಿ ಶೆಟ್ಟಿ ದೋಣಿಂಜೆಗುತ್ತು, ಸರಸ್ವತಿ ಜಿ.ರೈ ಬೋಳಂತೂರು ಗುತ್ತು,ಕಾಂತಪ್ಪ ಶೆಟ್ಟಿ ‌ಅಗರಿ, ಮಹಾಬಲ ಶೆಟ್ಟಿ ಪಟ್ಲಗುತ್ತು, ಜಯರಾಮ ರೈ ಮಲಾರು, ಸುರೇಶ ರೈ ಮಕರಜ್ಯೋತಿ, ರವೀಂದ್ರ ಕಂಬಳಿ ಸುಜೀರುಬೀಡು,ಸಚ್ಚಿದಾನಂದ ಶೆಟ್ಟಿ ಬೊಂಡಾಲ,ಸಿಎ ಯತೀಶ್ ಭಂಡಾರಿ ಬಿಸಿರೋಡು, ಪ್ರದೀಪ್ ಆಳ್ವ ಅಜೆಕಲಗುತ್ತು,ಶ್ರೀ ನಾಥ್ ಶೆಟ್ಟಿ ಮೊಡಂಕಾಪುಗುತ್ತು ,ಆನಂದ ಶೆಟ್ಟಿ ಕಾಂಪ್ರಬೈಲು, ಚೇತನ್ ರೈ ಮಾಣಿ, ಪುರಂದರ ಶೆಟ್ಟಿ ಗೋಳ್ತಮಜಲು ಇವರಿಗೆ ವಿಂಶತಿ ಸನ್ಮಾನ ಮಾಡಲಾಯಿತು.

ವಿವಿಧ ವಲಯಾಧ್ಯಕ್ಷರು ವೇದಿಕೆಯಲ್ಲಿದ್ದರು. ಚಂದ್ರಹಾಸ ಶೆಟ್ಟಿ ರಂಗೋಲಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು. ಡಾ.ಪ್ರಖ್ಯಾತ ಶೆಟ್ಟಿ ಪ್ರಾರ್ಥಿಸಿದರು. ಆಶಾ ರೈ ಮತ್ತಿತರರು ಸನ್ಮಾನ ಪತ್ರ ವಾಚಿಸಿದರು. ಭಾನುವಾರ ಬೆಳಿಗ್ಗೆ ಶೈಕ್ಷಣಿಕ,ವೃತ್ತಿಮಾರ್ಗದರ್ಶನ,ವಿಂಶತಿ ಗೌರವ,ನೃತ್ಯ ಸ್ಪರ್ಧೆ,ಯುವೋಚ್ಚಯ,ಸಮಾರೋಪ ಸಮಾರಂಭ ನಡೆಯಲಿದೆ.

ವರದಿ : ಜಯಾನಂದ ಪೆರಾಜೆ, ಬಂಟ್ವಾಳ

Leave a Reply

Your email address will not be published. Required fields are marked *