ಬೆಳ್ತಂಗಡಿ: ದನದ ಮೇವು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಮಗುಚಿ ಬಿದ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ಮೇ.26ರಂದು ನಡೆದಿದೆ.
ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ.

ಈ ವೇಳೆ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.



