ಬೆಳ್ತಂಗಡಿ: ಸಿಡಿಲು ಬಡಿದು ವ್ಯಕ್ತಿಯೋರ್ವರು ಗಾಯಗೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಮೇ 26 ರಂದು ಬೆಳಗ್ಗೆ ನಡೆದಿದೆ.
ಗಾಯಗೊಂಡಿರುವ ವ್ಯಕ್ತಿಯನ್ನು ಶೀನ ಮಲೆಕುಡಿಯ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಇವರು ಮನೆಯಲ್ಲಿದ್ದ ವೇಳೆ ಸಿಡಿಲು ಬಡಿದಿದ್ದು ಪರಿಣಾಮ ಗಾಯಗೊಂಡಿದ್ದರು.
ಬಳಿಕ ವ್ಯಕ್ತಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಮ್ ಭೇಟಿ ನೀಡಿದ್ದಾರೆ.

