ಪುತ್ತೂರು : ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ.

ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದಾ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಪುತ್ತೂರು ಸಂಚಾರಿ ಪೊಲೀಸರು ಘಟನ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

