Breaking
21 Jun 2025, Sat

ಮಗುಚಿ ಬಿದ್ದ ದೋಣಿ: ಇಬ್ಬರು ಮೀನುಗಾರರು ನೀರುಪಾಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಕಡಲಬ್ಬರ ಕೂಡ ಜೋರಾಗಿದ್ದು, ನಿಯಮ ಮೀರಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲಾದ ಘಟನೆ ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಬಳಿ ನಡೆದಿದೆ.

ತೋಟಬೆಂಗ್ರೆ ನಿವಾಸಿಗಳಾದ ಯಶವಂತ್ ಮತ್ತು ಕಮಲಾಕ್ಷ ನೀರುಪಾಲಾದವರು.

ಈ ಇಬ್ಬರು ಮೀನುಗಾರರು ನಿಯಮ ಮೀರಿ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಅವಘಡ ಸಂಭವಿಸಿದ್ದು, ನಾಡದೋಣಿಯ ಅವಶೇಷಗಳು ಕಡಲತೀರಕ್ಕೆ ತೇಲಿ ಬಂದಿವೆ.

ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯ ನಡೆದಿದೆ.

Leave a Reply

Your email address will not be published. Required fields are marked *