ಉಡುಪಿ: ಕೋವಿಡ್ ಪಾಸಿಟಿವ್ ನಿಂದ ಮೃತಪಟ್ಟ ವ್ಯಕ್ತಿಯ ಮನೆಗೆ ಕಾಪು ತಹಶೀಲ್ದಾರ್ ಡಾ|ಪ್ರತಿಭಾ ಆರ್. ಅವರು ಜೂ. 3 ರಂದು ಭೇಟಿ ನೀಡಿದ್ದಾರೆ.
ಈ ವೇಳೆ ಮನೆಯವರ ಆರೋಗ್ಯ ವಿಚಾರಿಸಿದ ಅವರು ಸಾಂತ್ವನ ಹೇಳಿದ್ದಾರೆ.
ಮನೆಯವರಿಗೆ ಕೋವಿಡ್ ಲಕ್ಷಣಗಳು ಇರುವುದಿಲ್ಲ. ಮೃತರ ಶವ ಆಸ್ಪತ್ರೆಯಲ್ಲಿಯೇ ಇದ್ದು, ಜೂ. 6 ರಂದು ಮೃತರ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಿ ಎಂದು ತಹಶೀಲ್ದಾರ್ ಮನೆಯವರಿಗೆ ಸೂಚನೆ ನೀಡಿದ್ದಾರೆ.

ಕಾಪು ತಾಲೂಕಿನನ ಬೆಳ್ಳೆ ಗ್ರಾಮದ ನಿವಾಸಿಯಾಗಿರುವ ಪೀಟರ್ ಮಥಾಯಸ್(65) ಅವರು ಕರುಳಿನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಈ ನಿಟ್ಟಿನಲ್ಲಿ ಅವರನ್ನು ಮೇ. 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೋವಿಡ್ ಪರೀಕ್ಷೆ ಮಾಡಿದಾಗ ಕೊವೀಡ್ ದೃಢಪಟ್ಟಿದ್ದು, ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ಡಾ|ವಾಸುದೇವ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ರಾವ್, ಡಾ| ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಉಪಸ್ಥಿತರಿದ್ದರು
