Breaking
23 Jun 2025, Mon

ಸುಹಾಸ್ ಶೆಟ್ಟಿ ಹತ್ಯೆ: ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿ ಸೆರೆ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ರಜಾಕ್ (59) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾನೆ.

ಮೇ.1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು,ಪ್ರಕರಣದ ತನಿಖೆಯು ಮುಂದುವರಿದಿದೆ.

Leave a Reply

Your email address will not be published. Required fields are marked *