Breaking
23 Jun 2025, Mon

ಕೊಳ್ತಮಜಲು ನಿವಾಸಿ ರಹಿಮಾನ್ ಹತ್ಯೆ ಪ್ರಕರಣ ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳ: ತಾಲೂಕಿನ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಜೂ.3 ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೆ ಒಳಗಾದ ಆರೋಪಿಗಳನ್ನು  ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಎಂದು ಗುರುತಿಸಲಾಗಿದೆ.

ಈಗಾಗಲೇ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಈ ಮೂಲಕ  ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ಬಂಟ್ವಾಳ ತಾಲೂಕಿನ  ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಕಾಳಿ ದೇವಸ್ಥಾನ ಬಳಿಯ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳದ ನಿವಾಸಿ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಅಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಮೇ 27ರಂದು ಕೊಳತ್ತಮಜಲು ನಿವಾಸಿಯಾಗಿರುವ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮಾಡಲಾಗಿತ್ತು.ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೂ ಹಲ್ಲೆಯನ್ನು ನಡೆಸಲಾಗಿತ್ತು.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *