ಬ್ರಹ್ಮಾವರ: ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾಯ೯ ನಿವ೯ಹಿಸುತ್ತಿದ್ದ ಅಶೋಕ್ ಪೂಜಾರಿ ಅವರು ಜೂನ್ 6ರಂದು ಸಾರ್ವಜನಿಕರೊಬ್ಬರಿಂದ ರೂ. 20,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತದ ತಂಡ ರೆಡ್ ಹ್ಯಾಂಡ್ ಆಗಿ ಬಂಧನ ಮಾಡಿದೆ.

ಅವರ ಮೇಲೆ, ದೂರುದಾರರ ಮನೆಗೆ ವಿದ್ಯುತ್ ಸಂಪರ್ಕ ನೀಡುವುದರಲ್ಲಿ ವಿಳಂಬ ಮಾಡುತ್ತಾ, ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದ್ದು, ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ನೀಡಿದ ದೂರು ಆಧರಿಸಿ ಬಲೆ ಬೀಸಲಾಗಿದ್ದು, ಅವರನ್ನು ಬಂಧಿಸಲಾಗಿದೆ.

ಈ ಕಾರ್ಯಾಚರಣೆಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಕುಮಾರಚಂದ್ರ ಮಾರ್ಗದರ್ಶನ ನೀಡಿದ್ದು, ಉಡುಪಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ನೇತೃತ್ವ ವಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ತನಿಖೆ ಮುಂದುವರಿಯುತ್ತಿದೆ.
