ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಇದರ 2025 – 2026 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷೆಯಾಗಿ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕೋಶಾಧಿಕಾರಿಯಾಗಿ ಸೋಮನಾಥ ಸಾಲ್ಯಾನ್ ರಾಮನಗರ, ಜೊತೆ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು ಮತ್ತು ಸತೀಶ್ ಸಂಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕುಲಾಲ್ ಬಂಟ್ವಾಳ, ಸೇವಾದಳಪತಿಯಾಗಿ ಜಯಂತ್ ಕುಲಾಲ್ ಅಗ್ರಬೈಲ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಶಾ ಗಿರಿಧರ್ ಪಾಪಿನಕೋಡಿ ಇವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



