ಬಂಟ್ವಾಳ : ತಾಲೂಕಿನ ವೀರಕಂಬ ಗ್ರಾಮದ ಬಾಯಿಲ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 35 ವರ್ಷಗಳ ಕಾಲ ಅಂಗನವಾಡಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಜಯಶ್ರೀ ಇವರಿಗೆ ಅಂಗನವಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಶಕ್ತಿ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಬಾಯಿಲ ಅಂಗನವಾಡಿಗೆ ನಿಯಕ್ತಿಕೊಂಡ ನೂತನ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರಜ್ಞಾಲತಾ ರವರನ್ನು ಹೂ ಗುಚ್ಚ ನೀಡಿ ಸ್ವಾಗತಿಸಲಾಯಿತು.


