Breaking
13 Aug 2025, Wed

ವಿಟ್ಲ ಅಡ್ಯನಡ್ಕ ಬಳಿ ಅಪಘಾತ: ಪಾದಚಾರಿಗೆ ಕಾರು ಢಿಕ್ಕಿ, ಇಬ್ಬರಿಗೆ ಗಾಯ

ವಿಟ್ಲ: ಅಡ್ಯನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಇಬ್ಬರೂ ಗಾಯಗೊಂಡಿರುವ ಘಟನೆ ಜೂ.22 ರಂದು ನಡೆದಿದೆ.

ಈ ಅಪಘಾತದಲ್ಲಿ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಅವರು ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *