Breaking
22 Mar 2026, Sun

ವರ್ಕಾಡಿಯಲ್ಲಿ ನಡೆದ ಭೀಭತ್ಸ ಘಟನೆ :ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ, ನೆರೆಮನೆಯ ಮಹಿಳೆಯ ಸ್ಥಿತಿ ಗಂಭೀರ

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ವರ್ಕಾಡಿಯಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದಾರೆ ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ.

ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜೂನ್ 26 ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಪುತ್ರ ಮೇಲ್ವಿನ್ ಮೊಂತೇರೋ (33) ಈ ಕೃತ್ಯವೆಸಗಿ ಪರಾರಿಯಾಗಿದ್ದಾನೆ.

ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರವೇ ವಾಸಿಸುತ್ತಿದ್ದು, ಇನ್ನೋರ್ವ ಮಗ ಅಲ್ವಿನ್ ಮೊಂತೇರೋ ಕೊಲ್ಲಿ ರಾಷ್ಟ್ರದಲ್ಲಿದ್ದಾನೆ. ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆದ ಬಳಿಕ ಆಕೆಗೂ ಬೆಂಕಿ ಹಚ್ಚಿದ್ದಾನೆ. ತಾಯಿ ಮೃತ ದೇಹ ಮನೆಯ ಹಿಂಭಾಗದ ಪೊದರುಗಳಡೆಯಲ್ಲಿ ದೊರೆತಿದೆ.

ಆರೋಪಿ ಮೇಲ್ವಿನ್ ಕಟ್ಟಡ ಕಾರ್ಮಿಕನಾಗಿದ್ದು, ಕೊಲೆ ಕೃತ್ಯಕ್ಕೆ ಕಾರಣವೇನೆಂಬುದು ತಿಳಿದು ಬಂದಿಲ್ಲ.

ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *