ಸಿದ್ದಾಪುರ: ಬೈಕ್ ಗೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಗಂಬೀರವಾಗಿ ಗಾಯಗೊಂಡಿರುವ ಘಟನೆ ಬೆಳ್ವೆ ಗ್ರಾಮದ ಸುರ್ಗೋಳಿಯಲ್ಲಿ ನಡೆದಿದೆ.

ಅಪಘಾತದ ಪರಿಣಾಮ ಬೈಕ್ ಸವಾರ ಹರ್ಷ ಗಂಬೀರವಾಗಿ ಗಾಯಗೊಂಡಿದ್ದು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಟಿಪ್ಪರ್ ಚಾಲಕ ಪ್ರವೀಣ್ ಯಡಮೊಗೆ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



