ಅರಂತೋಡು: ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಕಾರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಳ್ಯದ ಪರಿವಾರಕಾನ ಸರ್ವಿಸ್ ಸ್ಟೇಷನ್ ತಿರುವಿನ ಬಳಿ ನಡೆದಿದೆ.

ಸುಳ್ಯದಿಂದ ದೇವರಕೊಲ್ಲಿಯತ್ತ ಹೋಗುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.


