Breaking
21 Mar 2026, Sat

ಕಟ್ಟಡದ ನೆಲಮಾಳಿಗೆಯೊಂದರಲ್ಲಿಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮಂಗಳೂರು : ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.

ಜೂನ್ 28ರಂದು ಕಾರ್ಮಿಕನೋರ್ವ ಕಟ್ಟಡದಲ್ಲಿನ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವವನ್ನು ನೋಡಿದ್ದಾನೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿದ ಕಾರಣ ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು.

ಮೃತರ ಗುರುತು ಹಾಗೂ ಸಾವಿನ ಕಾರಣ ತನಿಖೆ ನಡೆಸುತ್ತಿದ್ದಾರೆ. ಕಾರ್ಮಿಕ ನೀಡಿದ ವರದಿಯ ಆಧಾರದ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2025 ರಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023 ರ ಸೆಕ್ಷನ್ 103(1) ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *