Breaking
21 Mar 2026, Sat

ಬಂಟ್ವಾಳ : ನಿಯಂತ್ರಣ ತಪ್ಪಿ ಕಾರು ಪಲ್ಟಿ- ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ – ಬೆಂಗಳೂರು ರಸ್ತೆಯ ಬೊಳ್ಳುಕಲ್ಲು ಎಂಬಲ್ಲಿ ಜೂನ್ 30ರಂದು ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಕಡೇಶಿವಾಲಯ ನಿವಾಸಿ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಪ್ಪು ಕಲ್ಲಿನ ಕೆತ್ತನೆ (ಶಿಲ್ಪಿ) ಯ ಕೆಲಸ ಮಾಡುತ್ತಿರುವ ರಂಜಿತ್ ಅವರು ಕಡೇಶಿವಾಲಯ ಮನೆಯಿಂದ ಶಂಭೂರು ಕಡೆಗೆ ಕಾರಿನಲ್ಲಿ ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *