ನೆತ್ತರಕೆರೆ : ನವೋದಯ ಮಿತ್ರ ಕಲಾವೃಂದ (ರಿ) ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾವೃಂದ (ರಿ) ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ಸಹಯೋಗದಲ್ಲಿ ಸ್ವಚ್ಛ ಪರಿಸರ ಸುಂದರ ಜೀವನ ಎಂಬ ಆಶಯದೊಂದಿಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಜು. 6ರಂದು ನೆತ್ತರಕೆರೆಯಲ್ಲಿ ನಡೆಯಿತು.

ತಾಲೂಕಿನ ಪುದು ಕಳ್ಳಿಗೆ ಗ್ರಾಮದ ನೆತ್ತರಕೆರೆ ಪರಿಸರದ ಶಾಲಾ ವಠಾರ, ಅಶ್ವತ್ಥ ಕಟ್ಟೆ, ಕೆರೆ ಹಾಗೂ ರಸ್ತೆಯ ಇಕ್ಕೆಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನವೋದಯ ಮಿತ್ರ ಕಲಾ ವೃಂದದ ಅಧ್ಯಕ್ಷ ಜಗದೀಶ ಎನ್, ನೇತ್ರಾವತಿ ಮಾತೃಮಂಡಳಿಯ ಅಧ್ಯಕ್ಷೆ ಸುಶೀಲ ಶೇಖರ್ ಸಹಿತ ಸಂಘದ ಪದಾಧಿಕಾರಿಗಳು ಸದಸ್ಯರು ಪರಿಸರದ ಜನರು ಬಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *