ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದ ಪರಿಣಾಮ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮಳೆಯ ಪ್ರಮಾಣದಿಂದ ಮಣ್ಣು ಕುಸಿದಿದ್ದು, ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ. ವಾಹನಗಳ ಸವಾರರು ಬದಲಿ ಮಾರ್ಗದ ಮೂಲಕ ಸಂಚರಿಸಬೇಕೆಂದು ಪ್ರಕಟನೆ ತಿಳಿಸಿದೆ.




