ಹೊಸಂಗಡಿ : ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಯಾದ ಅಶೋಕ್ ಸರ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿ ಯಾದ ಗಣೇಶ್ ಸರ್ ಹಾಗೂ ಕಾಂತಪ್ಪ ರವರ ಸಮ್ಮುಖದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಒಕ್ಕೂಟದ ಅಧ್ಯಕ್ಷರಾದ ರೋಹಿತಾಕ್ಷ ಹಾಗೂ ಸ್ಮಶಾನ ಸಮಿತಿ ಅಧ್ಯಕ್ಷರಾದ ಹರೀಶ್ ರವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.




