Breaking
20 Jun 2026, Sat

99ನೇ ಶ್ರೀ ಶಾರದಾ ಪೂಜಾ ಮಹೋತ್ಸವದ ಪೂರ್ವಭಾವಿ ಸಭೆ

ಬಂಟ್ವಾಳ: ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಹಾಗೂ ಸುಭಾಷ್ ಯುವಕ ಮಂಡಲ ಸುಭಾಷ್ ನಗರ ಸಜೀಪ ಮೂಡ ಇದರ ಆಶ್ರಯದಲ್ಲಿ 99ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪೂರ್ವಭಾವಿ ಸಭೆ ಜು.20 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸುಭಾಷ್ ಯುವಕ ಮಂಡಲ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ನoದವರ ವಿನಾಯಕ ಶಂಕರ್ ನಾರಾಯಣ, ದುರ್ಗಾಂಬ ಕ್ಷೇತ್ರ ನೂತನ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿ ಪ್ರಸಾದ್, ಪೂoಜ ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್, ಶಾರದಾ ಪೂಜಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್, ಮಹಿಳಾ ಸಮಿತಿ ಅಧ್ಯಕ್ಷ ಪುಷ್ಪ ರಮೇಶ್ , ಗ್ರಾಮ ಪಂಚಾಯಿತಿ ಸದಸ್ಯ ಯೋಗೀಶ್ ಬೆಳ್ಚಡ ಮೊದಲಾದವರು ಸಲಹೆ ಸೂಚನೆ ನೀಡಿದರು.

ಮೂರು ದಿನಗಳ ಶಾರದಾ ಪೂಜೆಯ ಅಂಗವಾಗಿ ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಆಟೋ ಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

Leave a Reply

Your email address will not be published. Required fields are marked *